Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:13 - ಕನ್ನಡ ಸಮಕಾಲಿಕ ಅನುವಾದ

13 “ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಸೇನಾಧೀಶ್ವರ ಯೆಹೋವನು ಇಂತೆಂದನು - ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:13
23 ತಿಳಿವುಗಳ ಹೋಲಿಕೆ  

ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.


ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.


ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ.


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’


“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.


ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.


“ಆದ್ದರಿಂದ ನೀನು ಈ ಮಾತುಗಳನ್ನೆಲ್ಲಾ ಅವರಿಗೆ ಹೇಳಬೇಕು. ಆದರೆ ಅವರು ನಿನ್ನ ಮಾತನ್ನು ಕೇಳುವುದಿಲ್ಲ. ಅವರನ್ನು ನೀನು ಕರೆಯುವೆ. ಆದರೆ ಅವರು ನಿನಗೆ ಉತ್ತರ ಕೊಡುವುದಿಲ್ಲ.


ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.


“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.


ನಮ್ಮ ಪ್ರಾರ್ಥನೆಯು ನಿನ್ನ ಸನ್ನಿಧಿಗೆ ಸೇರದಂತೆ ನಿನ್ನನ್ನು ಮೇಘದಿಂದ ಮುಚ್ಚಿಕೊಂಡಿದ್ದೀರಿ.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು