Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:14 - ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:14
35 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ. ಅವುಗಳ ಗೋಪುರಗಳು ಹಾಳಾಗಿವೆ. ಅವುಗಳ ಬೀದಿಗಳನ್ನು ಯಾರೂ ಹಾದುಹೋಗದ ಹಾಗೆ ಹಾಳುಮಾಡಿದ್ದೆನೆ. ಅವುಗಳ ಪಟ್ಟಣಗಳು ನಾಶವಾದವು. ಹೀಗೆ ಅಲ್ಲಿ ಯಾವನೂ ಇರುವುದಿಲ್ಲ; ಯಾವ ಮನುಷ್ಯನೂ ಅಲ್ಲಿ ವಾಸಿಸುವುದೂ ಇಲ್ಲ.


ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.


ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?


ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.


ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ಅವುಗಳ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ, ಪೂರ್ವದ ಕಡೆಗೂ, ರಮ್ಯ ದೇಶದ ಕಡೆಗೂ ಪ್ರಬಲವಾಯಿತು.


ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.


ಇಗೋ, ಯೆಹೋವ ದೇವರ ಬಿರುಗಾಳಿ ರೌದ್ರವಾಗಿ ಹೊರಡುತ್ತದೆ. ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.


ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.


ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.


ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.


ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.


ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.


ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


ನಿನ್ನ ದೇಶದ ಜನರಿಗೆ ಹೀಗೆ ಹೇಳು, ‘ಯೆರೂಸಲೇಮಿನ ನಿವಾಸಿಗಳಿಗೆ ಮತ್ತು ಇಸ್ರಾಯೇಲರ ದೇಶಕ್ಕೆ ಸಾರ್ವಭೌಮ ಯೆಹೋವ ದೇವರು ಹೇಳಿದ್ದೇನೆಂದರೆ, ಅವರು ತಮ್ಮ ರೊಟ್ಟಿಯನ್ನು ಎಚ್ಚರಿಕೆಯಿಂದಲೇ ತಿನ್ನುವರು, ನೀರನ್ನು ಅಂಜಿಕೆಯಿಂದಲೇ ಕುಡಿಯುವರು. ಅದರಲ್ಲಿ ವಾಸವಾಗಿರುವವರೆಲ್ಲರ ಹಿಂಸಾಚಾರದಿಂದ ಅವರ ದೇಶವು ಸೊತ್ತನ್ನೆಲ್ಲಾ ಕಳೆದುಕೊಂಡು ಹಾಳಾಗುವುದು.


ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು. ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.


ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.


ಯೆಹೋವ ದೇವರ ವಾಕ್ಯವು ನನಗೆ ಪುನಃ ಉಂಟಾಗಿ ಹೇಳಿದ್ದೇನೆಂದರೆ,


ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು