Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:14 - ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಸ್ವಜನರಿಗಾಗಿ ಅವರ ಮೇಲ್ಗಡೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವದು; ಕರ್ತನಾದ ಯೆಹೋವನು ತುತೂರಿಯನ್ನೂದಿ ದಕ್ಷಿಣಪ್ರಾಂತದ ಬಿರುಗಾಳಿಗಳೊಡನೆ ನುಗ್ಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:14
28 ತಿಳಿವುಗಳ ಹೋಲಿಕೆ  

ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.


ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು.


ನಿನ್ನ ಹಾರುವ ಬಾಣಗಳ ಬೆಳಗಿಗೂ, ನಿನ್ನ ಮಿಂಚುವ ಈಟಿಯ ಹೊಳಪಿಗೂ ಸೂರ್ಯ ಚಂದ್ರರು ಆಕಾಶದಲ್ಲಿ ಸ್ಥಿರವಾಗಿದ್ದಾರೆ.


ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮನ್ನು ಕಾಪಾಡುವರು. ಅದನ್ನು ರಕ್ಷಿಸಿ ಕಾಯುವರು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವರು.


ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?


ದಕ್ಷಿಣದಿಕ್ಕಿನಿಂದ ಬಿರುಗಾಳಿಯು ಬೀಸುತ್ತದೆ. ಉತ್ತರದಿಂದ ಚಳಿಯೂ ಬರುತ್ತದೆ.


ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು