Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರವಿುಸಿ ಪೌಳಿಗೋಡೆಯನ್ನು ಸಮುದ್ರದೊಳಕ್ಕೆ ಹೊಡೆದು ಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:4
14 ತಿಳಿವುಗಳ ಹೋಲಿಕೆ  

ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿಬಿಟ್ಟಿತು. ನೋಡುವವರೆಲ್ಲರ ಮುಂದೆ ನಿನ್ನನ್ನು ಬೂದಿಮಾಡುವೆನು.


ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?


ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.”


ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ.


ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. ಸಮುದ್ರಗಳ ಮಧ್ಯದಲ್ಲಿ ಭಯಂಕರವಾದ ಮರಣದ ಹಾಗೆ ನೀನು ಸಾಯುವೆ.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.


ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.


ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.


ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು