Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:6 - ಕನ್ನಡ ಸಮಕಾಲಿಕ ಅನುವಾದ

6 ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಿಸುವರು. ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು. ಸರ್ವೇಶ್ವರ ಇಂತೆನ್ನುತ್ತಾರೆ: “ಫಿಲಿಷ್ಟಿಯದ ಗರ್ವವನ್ನು ಅಡಗಿಸುವೆನು. ಅವರು ಸವಿಯುವ ರಕ್ತಸಿಕ್ತ ಮಾಂಸವನ್ನು ಅವರ ಬಾಯಿಂದ ಕಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಷ್ಡೋದಿನಲ್ಲಿ ವಿುಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಷ್ಡೋದಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯರು. ನಾನು ಅಹಂಕಾರದ ಪಿಲಿಷ್ಟಿಯ ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:6
13 ತಿಳಿವುಗಳ ಹೋಲಿಕೆ  

ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಅವರು ಸೇನಾಧೀಶ್ವರ ಯೆಹೋವ ದೇವರ ಜನರನ್ನು ಅವಮಾನಿಸಿ ಮತ್ತು ಅಪಹಾಸ್ಯ ಮಾಡಿದ್ದರಿಂದಲೇ ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವುದು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.


ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.


ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:


ಗಾಜವು ಕೈಬಿಡಲಾಗುವುದು; ಅಷ್ಕೆಲೋನ್ ಹಾಳಾಗುವುದು; ಅಷ್ಡೋದನ್ನು ಮಧ್ಯಾಹ್ನದಲ್ಲಿ ಖಾಲಿಮಾಡುವರು, ಎಕ್ರೋನ್ ಕಿತ್ತೆಸೆಯಲಾಗುವುದು.


ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.


ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು