Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:23 - ಕನ್ನಡ ಸಮಕಾಲಿಕ ಅನುವಾದ

23 ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:23
26 ತಿಳಿವುಗಳ ಹೋಲಿಕೆ  

ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.


“ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.


ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.


ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.


ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ


ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.


ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.


“ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು