Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:31 - ಕನ್ನಡ ಸಮಕಾಲಿಕ ಅನುವಾದ

31 ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:31
17 ತಿಳಿವುಗಳ ಹೋಲಿಕೆ  

ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.


ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.


ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು.


ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು, ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು. ಏಕೆಂದರೆ ನಾನು ಕೂಗಿದಾಗ, ಯಾರು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ, ಇವರು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.”


ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.


“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,


ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು