Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:4 - ಕನ್ನಡ ಸಮಕಾಲಿಕ ಅನುವಾದ

4 ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವು ಮೂಢರಿಗೆ ಜಾಣತನವನ್ನೂ ಯೌವನಸ್ಥರಿಗೆ ತಿಳುವಳಿಕೆಯನ್ನೂ ಬುದ್ಧಿಯನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:4
19 ತಿಳಿವುಗಳ ಹೋಲಿಕೆ  

ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.


“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.


“ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ.


ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.


ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ.


ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ಯೆಹೋವ ದೇವರು ಸರಳ ಹೃದಯದವರನ್ನು ಕಾಪಾಡುತ್ತಾರೆ; ನಾನು ಕೊರತೆಯಲ್ಲಿದ್ದಾಗ, ಅವರು ನನ್ನನ್ನು ರಕ್ಷಿಸಿದರು.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು