Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:13 - ಕನ್ನಡ ಸಮಕಾಲಿಕ ಅನುವಾದ

13 ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ವಿವೇಕಿಯ ತುಟಿಗಳಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:13
18 ತಿಳಿವುಗಳ ಹೋಲಿಕೆ  

ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು, ಮೂಢನ ಬೆನ್ನಿಗೆ ಬೆತ್ತ.


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.


ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.


ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.


ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.


ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.


ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.


ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.


ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.


ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.


ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ, ಅಥವಾ ಜಿಂಕೆಯು ಬಲೆಗೆ ಸಿಕ್ಕಿಬೀಳುವಂತೆ,


ಆಗ ಯೆಹೋವ ದೇವರು ಮೋಶೆಗೆ, “ಮಿಡತೆಗಳಿಗಾಗಿ ನಿನ್ನ ಕೈಯನ್ನು ಈಜಿಪ್ಟಿನ ಮೇಲೆ ಚಾಚು. ಅವು ಈಜಿಪ್ಟಿನ ಮೇಲೆ ಬಂದು, ಆಲಿಕಲ್ಲಿನ ಮಳೆಯು ದೇಶದಲ್ಲಿ ಉಳಿಸಿದ ಹಸುರಾದದ್ದನ್ನೆಲ್ಲಾ ತಿಂದುಬಿಡಲಿ,” ಎಂದರು.


ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.


ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು