Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:14 - ಕನ್ನಡ ಸಮಕಾಲಿಕ ಅನುವಾದ

14 ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವದಿಲ್ಲ, ಮೂರ್ಖನ ಭಾಷಣ ಸಮೀಪನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೋ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:14
17 ತಿಳಿವುಗಳ ಹೋಲಿಕೆ  

ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.


ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.


ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, ಆದರೆ ಹರಟೆಯ ಮೂರ್ಖನು ಬೀಳುವನು.


ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.


ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.


ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.


ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.


ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು