Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:17 - ಕನ್ನಡ ಸಮಕಾಲಿಕ ಅನುವಾದ

17 ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಶಿಸ್ತನ್ನು ಸ್ವೀಕರಿಸಿಕೊಳ್ಳುವವನು ಜೀವಮಾರ್ಗವನ್ನು ತೋರಿಸುತ್ತಾನೆ. ತಿದ್ದುಪಡಿಯನ್ನು ಅಲಕ್ಷಿಸುವವನು ಇತರರನ್ನು ದಾರಿ ತಪ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:17
22 ತಿಳಿವುಗಳ ಹೋಲಿಕೆ  

ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.


ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?


ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.


ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.


ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ಆ ಮುದುಕನು ತನ್ನ ಕಣ್ಣೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದ ಯಾತ್ರಿಕನನ್ನು ಕಂಡು, “ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ?” ಎಂದನು.


ನಾನು ದೇವರ ಸಭೆಯಲ್ಲಿ ಗಂಭೀರ ಸಮಸ್ಯೆಗೆ ಒಳಗಾದೆ,” ಎಂದು ಹೇಳುವೆ.


ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು