Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:9 - ಕನ್ನಡ ಸಮಕಾಲಿಕ ಅನುವಾದ

9 ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು; ವಕ್ರಮಾರ್ಗಿಯು ಬೈಲಿಗೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೋ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:9
17 ತಿಳಿವುಗಳ ಹೋಲಿಕೆ  

ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.


“ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.


ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ; ನೀನು ಎಡವದೆ ನಡೆಯುವೆ.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.


ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.


ಅವನ ಹಗೆತನವು ಮೋಸದಿಂದ ಮುಚ್ಚಲ್ಪಟ್ಟಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವುದು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


“ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು