Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:19 - ಕನ್ನಡ ಸಮಕಾಲಿಕ ಅನುವಾದ

19 ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:19
18 ತಿಳಿವುಗಳ ಹೋಲಿಕೆ  

ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ.


ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.


ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.


ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.


ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು.


ನೀವು ಬದುಕಿ ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನ್ಯಾಯವನ್ನು ಅಂದರೆ ಕೇವಲ ನ್ಯಾಯವನ್ನೇ ಅನುಸರಿಸಬೇಕು.


ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ ಎಂದು ಹೇಳು,” ಎಂದರು. ಆಗ ಎಲೀಯನು ಹೊರಟುಹೋಗಿ ಅದರಂತೆ ಹೇಳಿದನು.


ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು