Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:23 - ಕನ್ನಡ ಸಮಕಾಲಿಕ ಅನುವಾದ

23 ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, ದುಷ್ಟರ ಅಪೇಕ್ಷೆಯು ತೀರ್ಪಿಗೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸಜ್ಜನರ ಕೋರಿಕೆ ಕಲ್ಯಾಣ ಸಾಧಕ; ದುರ್ಜನರ ನಿರೀಕ್ಷೆ ಕೋಪಾಗ್ನಿ ಸಾಧಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಜ್ಜನರ ಆಶೆಯು ಮಂಗಳಾಸ್ಪದ; ದುರ್ಜನರ ನಿರೀಕ್ಷೆಯು ರೋಷಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಳ್ಳೆಯವರ ಬಯಕೆ ಅವರನ್ನು ಕ್ಷೇಮಕ್ಕೆ ನಡೆಸುತ್ತದೆ. ಆದರೆ ದುಷ್ಟರ ಆಕಾಂಕ್ಷೆ ಅವರನ್ನು ದಂಡನೆಗೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:23
16 ತಿಳಿವುಗಳ ಹೋಲಿಕೆ  

ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.


ಯೆಹೋವ ದೇವರಲ್ಲಿ ಆನಂದವಾಗಿರು; ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.


ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.


ನೀತಿವಂತರ ನಿರೀಕ್ಷೆಯು ಆನಂದಕರವಾಗಿರುವುದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವುದು.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.


ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು.


ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.


ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ!


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.


ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.


ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು