Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:4 - ಕನ್ನಡ ಸಮಕಾಲಿಕ ಅನುವಾದ

4 ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:4
15 ತಿಳಿವುಗಳ ಹೋಲಿಕೆ  

ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!


ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.


ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.


ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು