Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:13 - ಕನ್ನಡ ಸಮಕಾಲಿಕ ಅನುವಾದ

13 ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆಡುಕನು ತನ್ನ ಕೆಟ್ಟಮಾತುಗಳಿಂದಲೇ ಸಿಕ್ಕಿಕೊಳ್ಳುವನು. ಆದರೆ ಒಳ್ಳೆಯವನು ಇಕ್ಕಟ್ಟುಗಳಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:13
21 ತಿಳಿವುಗಳ ಹೋಲಿಕೆ  

ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.


ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು.


ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.


ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.


ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.


ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.


ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.


ಆಗ ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನಿಗೂ, ಅವನ ಸಹೋದರ ಬಾಣನಿಗೂ ಉತ್ತರವಾಗಿ, “ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಜೀವದಾಣೆ,


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.


ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.


ಅವರು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾರೆ; ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.


ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.


ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು