Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:25 - ಕನ್ನಡ ಸಮಕಾಲಿಕ ಅನುವಾದ

25 ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕಳವಳವು ಮನಸ್ಸನ್ನು ಕುಗ್ಗಿಸುವದು; ಕನಿಕರದ ಮಾತು ಅದನ್ನು ಹಿಗ್ಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:25
19 ತಿಳಿವುಗಳ ಹೋಲಿಕೆ  

ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.


ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.


ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.


ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.


ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.


ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?


ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.


ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ.


ಬಾಧಿತರ ದಿನಗಳೆಲ್ಲವೂ ದುಃಖಭರಿತ. ಆದರೆ ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.


ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ.


ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ.


ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ. ಒಳ್ಳೆಯ ವಾರ್ತೆಯು ಎಲುಬುಗಳನ್ನು ಪುಷ್ಟಿಗೊಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು