Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:28 - ಕನ್ನಡ ಸಮಕಾಲಿಕ ಅನುವಾದ

28 ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧರ್ಮಮಾರ್ಗದಿಂದ ಜೀವಲಾಭವು; ಆ ಸುಪಥಮಾರ್ಗವು ಅಮರಣವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:28
17 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.


ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ದೇವರು ನೀತಿವಂತರಾಗಿದ್ದಾರೆಂಬುದು ನಿಮಗೆ ಗೊತ್ತಾಗಿದ್ದರೆ, ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನೂ ಅವರಿಂದ ಹುಟ್ಟಿದವನೆಂದು ನೀವು ತಿಳಿದಿರಬೇಕು.


ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.


ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ.


ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು.


ನೋಡಿರಿ, ನಾನು ಈ ಹೊತ್ತು ಜೀವ ಸಮೃದ್ಧಿಯನ್ನೂ, ಮರಣ ನಾಶನವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು.


“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.


“ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.


ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.


ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು