Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:6 - ಕನ್ನಡ ಸಮಕಾಲಿಕ ಅನುವಾದ

6 ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು; ಯಥಾರ್ಥವಂತರ ನುಡಿ ರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೋ ಜನರನ್ನು ಅಪಾಯದಿಂದ ರಕ್ಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:6
12 ತಿಳಿವುಗಳ ಹೋಲಿಕೆ  

ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು.


“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.


ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ಆದ್ದರಿಂದ ಈಗ ವಿಚಾರಣೆಯ ಬಗ್ಗೆ ಹೆಚ್ಚಿನ ನಿರ್ದಿಷ್ಟವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ನೆಪದಿಂದ ಪೌಲನನ್ನು ನಿಮ್ಮ ಮುಂದೆ ತರುವಂತೆ ನೀವೂ ನ್ಯಾಯಸಭೆಯೂ ಸಹಸ್ರಾಧಿಪತಿಯನ್ನು ಬೇಡಿಕೊಳ್ಳಿರಿ. ಇಲ್ಲಿಗೆ ಬರುವ ಮೊದಲೇ ಪೌಲನನ್ನು ನಾವು ಕೊಂದುಬಿಡುತ್ತೇವೆ,” ಎಂದರು.


ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.


ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು