Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:12 - ಕನ್ನಡ ಸಮಕಾಲಿಕ ಅನುವಾದ

12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:12
20 ತಿಳಿವುಗಳ ಹೋಲಿಕೆ  

ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.


ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.


ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ.


ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.


ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಂಡಿದ್ದರಿಂದ ಇನ್ನು ನಾನು ಮರಣ ಹೊಂದಲು ಸಿದ್ಧನಾಗಿದ್ದೇನೆ. ನೀನು ಇನ್ನೂ ಜೀವದಿಂದ ಇದ್ದೀಯೆ,” ಎಂದನು.


ಯೆರೂಸಲೇಮಿನ ಪುತ್ರಿಯರೇ, ನಿಮಗೆ ಆಣೆಯಿಟ್ಟು ಹೇಳುತ್ತೇನೆ. ನೀವು ನನ್ನ ಪ್ರಿಯನನ್ನು ಕಂಡರೆ, ನಾನು ಪ್ರೀತಿಯಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.


ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.


ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.


ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು