Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:16 - ಕನ್ನಡ ಸಮಕಾಲಿಕ ಅನುವಾದ

16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳುವಳಿಕೆಯಿಂದ ನಡಿಸುವನು; ಮೂಢನು ತನ್ನ ಮೂರ್ಖತನವನ್ನು ಡಂಭವಾಗಿ ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:16
16 ತಿಳಿವುಗಳ ಹೋಲಿಕೆ  

ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.


ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.


ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.


ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.


ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.


ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.


ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ.


ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು