Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:18 - ಕನ್ನಡ ಸಮಕಾಲಿಕ ಅನುವಾದ

18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ; ಗದರಿಕೆಯನ್ನು ಗಮನಿಸುವವನಿಗೆ ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:18
15 ತಿಳಿವುಗಳ ಹೋಲಿಕೆ  

ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ. ಆದರೆ ಜಾಣನು ಗದರಿಕೆಯನ್ನು ಲಕ್ಷಿಸುವನು.


ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.


ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.


ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.


ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.


ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.


ಮೂಢರ ಹಾಡನ್ನು ಕೇಳುವುದಕ್ಕಿಂತ, ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು