Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:20 - ಕನ್ನಡ ಸಮಕಾಲಿಕ ಅನುವಾದ

20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:20
27 ತಿಳಿವುಗಳ ಹೋಲಿಕೆ  

ಜೀವದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ.


“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.


ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’


ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.


ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,


ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,


ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ.


ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗ ಲೋಟನನ್ನು ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.


ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು.


ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,


ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು.


ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.


ನೀನು ಬುದ್ಧಿಹೀನನ ತುಟಿಗಳಲ್ಲಿ ಪರಿಜ್ಞಾನವನ್ನು ಕಾಣದೆ ಹೋದರೆ, ಅವನ ಬಳಿಯಿಂದ ಹೊರಟು ಹೋಗು.


ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;


ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು