Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:15 - ಕನ್ನಡ ಸಮಕಾಲಿಕ ಅನುವಾದ

15 ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೂಢನು ಯಾವ ಮಾತನ್ನಾದರೂ ನಂಬುವನು; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:15
16 ತಿಳಿವುಗಳ ಹೋಲಿಕೆ  

ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.


ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.


ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.


ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ; ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ.


ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.


ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.


ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.


ದಾವೀದನು ತನಗೆ ವರ್ತಮಾನ ಹೇಳಿದ ಯುವಕನಿಗೆ, “ಸೌಲನೂ, ಅವನ ಮಗ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಪ್ರಶ್ನಿಸಿದನು.


ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು.


ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಉತ್ತರ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು