Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:19 - ಕನ್ನಡ ಸಮಕಾಲಿಕ ಅನುವಾದ

19 ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೆಟ್ಟವರು ಒಳ್ಳೆಯವರಿಗೆ ಬಾಗಬೇಕಾಗುವುದು; ದುಷ್ಟರು ಸಜ್ಜನರ ಬಾಗಿಲಿಗೆ ಅಡ್ಡಬೀಳಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೆಟ್ಟವರು ಒಳ್ಳೆಯವರಿಗೆ ಬಾಗುವರು; ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:19
17 ತಿಳಿವುಗಳ ಹೋಲಿಕೆ  

ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು.


ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.


ಆಗ ಯೆಹೋಷಾಫಾಟನು, “ಅವನ ಬಳಿಯಲ್ಲಿ ಯೆಹೋವ ದೇವರ ವಾಕ್ಯ ಇದೆ,” ಎಂದನು. ಇಸ್ರಾಯೇಲಿನ ಅರಸನೂ, ಯೆಹೋಷಾಫಾಟನೂ, ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.


ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ”


ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.


ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು.


ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ, ಆದರೆ ಜಾಣರು ಪರಿಜ್ಞಾನದಿಂದ ಆವರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು