Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:31 - ಕನ್ನಡ ಸಮಕಾಲಿಕ ಅನುವಾದ

31 ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:31
19 ತಿಳಿವುಗಳ ಹೋಲಿಕೆ  

ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.


ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.


ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.


ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.


ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಿನ್ನ ನಾಡಿನ ಸಹೋದರನಾಗಲಿ, ಪರದೇಶಿಯವನಾಗಲಿ, ಬಡ ಮತ್ತು ನಿರ್ಗತಿಕನಾಗಿರುವ ಕೂಲಿಯವನನ್ನು ಬಾಧಿಸಬಾರದು.


ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.


ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.


“ ‘ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣವಾಗಿ ಬಿದ್ದುಕೊಂಡರೆ, ಅವನು ಪರಕೀಯನಾಗಿದ್ದರೂ, ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು