Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:35 - ಕನ್ನಡ ಸಮಕಾಲಿಕ ಅನುವಾದ

35 ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಜಾಣನಾದ ಸೇವಕನಿಗೆ ರಾಜನ ಕೃಪೆ; ಮಾನಗೇಡಿಗೆ ರಾಜನ ರೌದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:35
18 ತಿಳಿವುಗಳ ಹೋಲಿಕೆ  

“ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು.


ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.


ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.


ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.


ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.


ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.


ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.


ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು.


ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.


ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.


ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.


ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು