Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:8 - ಕನ್ನಡ ಸಮಕಾಲಿಕ ಅನುವಾದ

8 ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:8
21 ತಿಳಿವುಗಳ ಹೋಲಿಕೆ  

ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.


ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ.


ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.


ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ!


ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.


ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ; ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ, ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.


ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ


ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ.


ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.


ಆಗ ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ, ಜ್ಞಾನವು ಮೂಢತನಕ್ಕಿಂತ ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.


ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ಬಹಳ ದಿನಗಳವರೆಗೆ ಜ್ಞಾಪಕಮಾಡಿಕೊಳ್ಳುವುದಿಲ್ಲ. ಇವರಿಬ್ಬರನ್ನೂ ಮರೆತುಹೋದ ದಿನಗಳು ಈಗಾಗಲೇ ಬಂದಿವೆ. ಮೂಢನಂತೆ ಜ್ಞಾನಿಯೂ ಸಹ ಸಾಯಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು