Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:10 - ಕನ್ನಡ ಸಮಕಾಲಿಕ ಅನುವಾದ

10 ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ; ಗದರಿಕೆಯನ್ನು ಕೇಳಲೊಲ್ಲದವನಿಗೆ ಸಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀತಿಮಾರ್ಗವನ್ನು ತೊರೆದವನಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:10
20 ತಿಳಿವುಗಳ ಹೋಲಿಕೆ  

ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.


ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.


ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.


ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.


“ಜನರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ನಾನು ಎಚ್ಚರವಾಗುವುದು ಯಾವಾಗ? ಪುನಃ ನಾನು ಅದನ್ನು ಕುಡಿದೇನು?” ಎಂದುಕೊಳ್ಳುವೆ.


ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ


ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ.


ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ?


ಅವರು ದೇವರನ್ನು ಹಿಂಬಾಲಿಸದೆ, ದೇವರ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.


ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು