Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:25 - ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಗರ್ವಿಷ್ಠನ ಮನೆಯನ್ನು ಕಿತ್ತುಹಾಕುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:25
20 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.


ಪೂರ್ವಕಾಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲಗಳನ್ನು ಅತಿಕ್ರಮಿಸಬೇಡ.


ದುಷ್ಟರ ಮನೆಯು ನಾಶವಾಗುವುದು, ಆದರೆ ಯಥಾರ್ಥವಂತರ ಗುಡಾರವು ಏಳಿಗೆಯಾಗುವುದು.


ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು, ಆದರೆ ನೀತಿವಂತರ ಮನೆಯು ಸ್ಥಿರವಾಗಿ ನಿಲ್ಲುವುದು.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ದುಷ್ಟರ ಆಲೋಚನೆಯು ಯೆಹೋವ ದೇವರಿಗೆ ಅಸಹ್ಯವಾಗಿದೆ, ಆದರೆ ಸೌಜನ್ಯಶೀಲ ಮಾತುಗಳು ಅವರ ದೃಷ್ಟಿಯಲ್ಲಿ ಶುದ್ಧವಾಗಿವೆ.


ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ.


ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು