Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:7 - ಕನ್ನಡ ಸಮಕಾಲಿಕ ಅನುವಾದ

7 ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:7
25 ತಿಳಿವುಗಳ ಹೋಲಿಕೆ  

ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.


ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.


ನನ್ನ ವಧುವೇ, ನಿನ್ನ ತುಟಿಗಳಿಂದ ಜೇನು ಸುರಿಯುತ್ತಿದೆ. ಹಾಲೂ, ಜೇನೂ ನಿನ್ನ ನಾಲಿಗೆ ಅಡಿಯಲ್ಲಿವೆ. ನಿನ್ನ ವಸ್ತ್ರಗಳ ಸುವಾಸನೆಯು ಲೆಬನೋನಿನ ಸುಗಂಧದಂತಿದೆ.


ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ ನನ್ನ ತುಟಿಗಳಿಂದ ನಾನು ವರ್ಣಿಸಿದ್ದೇನೆ.


ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.


ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.


ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು. ಆದರೆ ದುಷ್ಟನ ಆದಾಯವು ವಿನಾಶ ತರುವುದು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ. ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.


ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.


ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ, ಮೂರ್ಖನ ಹೃದಯವು ಎಡಗಡೆ ಸಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು