Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:1 - ಕನ್ನಡ ಸಮಕಾಲಿಕ ಅನುವಾದ

1 ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೃದಯದ ಸಂಕಲ್ಪವು ಮನುಷ್ಯನ ವಶವು; ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜನರು ತಾವು ಹೇಳಬೇಕಾದದ್ದನ್ನು ಆಲೋಚಿಸಿಕೊಂಡರೂ ನಾಲಿಗೆಗೆ ತಕ್ಕ ಮಾತುಗಳನ್ನು ಕೊಡುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:1
24 ತಿಳಿವುಗಳ ಹೋಲಿಕೆ  

ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?


ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಸ್ವಾರ್ಥದ ಲಾಭಗಳ ಕಡೆಗಲ್ಲ, ಆದರೆ ನಿಮ್ಮ ಶಾಸನಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸಿರಿ.


ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.


ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ. ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ.


“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಬೇಕೆಂದಿರುವೆಯೋ?


ನನ್ನ ದಿನಗಳು ಮುಗಿದು ಹೋದವು; ನನ್ನ ಹೃದಯದ ಬಯಕೆಯಾಗಿರುವ ನನ್ನ ಉದ್ದೇಶಗಳು ಭಂಗವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು