Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:21 - ಕನ್ನಡ ಸಮಕಾಲಿಕ ಅನುವಾದ

21 ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವದು; ಸವಿತುಟಿಯಿಂದ ಉಪದೇಶಶಕ್ತಿಯು ಹೆಚ್ಚುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:21
18 ತಿಳಿವುಗಳ ಹೋಲಿಕೆ  

ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.


ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು.


ಮಗನೇ, ನಿನ್ನ ಹೃದಯವು ಜ್ಞಾನವುಳ್ಳದ್ದಾಗಿದ್ದರೆ, ನನ್ನ ಹೃದಯವು ಹರ್ಷಿಸುವುದು.


ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.


ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.


ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.


ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.


ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು