Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:12 - ಕನ್ನಡ ಸಮಕಾಲಿಕ ಅನುವಾದ

12 ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭಂಗಕ್ಕೆ ಮೊದಲು ಗರ್ವದ ಹೃದಯ; ಮಾನಕ್ಕೆ ಮುಂಚೆ ದೈನ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:12
17 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ. ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;


ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.


ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,


ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, “ ‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


“ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು