Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:15 - ಕನ್ನಡ ಸಮಕಾಲಿಕ ಅನುವಾದ

15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜ್ಞಾನಿಗೆ ಹೆಚ್ಚು ಕಲಿತುಕೊಳ್ಳುವುದಕ್ಕೆ ಇಷ್ಟ; ಆದ್ದರಿಂದ ಅವನು ಗಮನವಿಟ್ಟು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:15
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.


ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.


ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.


ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.


ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.


ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.


ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಜೀವದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ.


ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು