Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:2 - ಕನ್ನಡ ಸಮಕಾಲಿಕ ಅನುವಾದ

2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವದೇ ಅವನಿಗಿಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೂಢನಿಗೆ ಅರ್ಥಮಾಡಿಕೊಳ್ಳಲು ಇಷ್ಟವಿಲ್ಲ. ಅವನು ತನ್ನ ಆಲೋಚನೆಗಳನ್ನೇ ಹೇಳಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:2
14 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.


ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.


ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.


ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.


ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.


ಅದರಂತೆಯೇ, ನೀವು ಸಹ ಆತ್ಮಿಕ ವರಗಳನ್ನು ಬಯಸುವುದರಿಂದ, ಸಭೆಗೆ ಭಕ್ತಿವೃದ್ಧಿ ಉಂಟುಮಾಡುವ ವರಗಳನ್ನೇ ಸಮೃದ್ಧವಾಗಿ ಪ್ರಯತ್ನಿಸಿರಿ.


ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು