Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:21 - ಕನ್ನಡ ಸಮಕಾಲಿಕ ಅನುವಾದ

21 ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜೀವನಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:21
21 ತಿಳಿವುಗಳ ಹೋಲಿಕೆ  

ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.


ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಆದ್ದರಿಂದ ಸೈತಾನನ ಸೇವಕರೂ ನೀತಿಯ ಸೇವಕರಂತೆ ಕಾಣಿಸಿಕೊಳ್ಳುವುದಕ್ಕೆ ತಮ್ಮನ್ನು ಮಾರ್ಪಡಿಸಿಕೊಳ್ಳುವುದು ಆಶ್ಚರ್ಯವೇನೂ ಅಲ್ಲ. ಅವರ ಕೃತ್ಯಗಳಿಗೆ ತಕ್ಕಂತೆ ಅವರಿಗೆ ಅಂತ್ಯವೂ ಇರುವುದು.


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು