Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:11 - ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ; [ಪರರ] ದೋಷವನ್ನು ಲಕ್ಷಿಸದಿರುವದು ಅವನಿಗೆ ಭೂಷಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:11
19 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.


ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.


ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.


ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.


ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.


ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.


ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.


ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.


ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.


ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು