Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:1 - ಕನ್ನಡ ಸಮಕಾಲಿಕ ಅನುವಾದ

1 ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:1
21 ತಿಳಿವುಗಳ ಹೋಲಿಕೆ  

ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;


ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.


ಮಗನೇ, ನನ್ನ ಮಾತುಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.


ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ. ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ.


ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು, ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು.


ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.


“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.


ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.


“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.


ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ?


ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ.


ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು