Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:22 - ಕನ್ನಡ ಸಮಕಾಲಿಕ ಅನುವಾದ

22 ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:22
19 ತಿಳಿವುಗಳ ಹೋಲಿಕೆ  

ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು,” ಎಂದು ಹೇಳಬೇಡ.


ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.


ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.


ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.


“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.


ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.


ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.


ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು