Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:2 - ಕನ್ನಡ ಸಮಕಾಲಿಕ ಅನುವಾದ

2 ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:2
18 ತಿಳಿವುಗಳ ಹೋಲಿಕೆ  

ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.


ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.


ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.


ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.


ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?


ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.


ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.


ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ, ಆದರೆ ಜ್ಞಾನಿಯು ಸಲಹೆಗೆ ಕಿವಿಗೊಡುವನು.


ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


“ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು