Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:20 - ಕನ್ನಡ ಸಮಕಾಲಿಕ ಅನುವಾದ

20 ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:20
20 ತಿಳಿವುಗಳ ಹೋಲಿಕೆ  

ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.


ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.


ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ.


ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು. ಆದರೆ ದುಷ್ಟನ ಆದಾಯವು ವಿನಾಶ ತರುವುದು.


ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.


ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು.


ಅವನು ಎಲ್ಲವನ್ನೂ ಹಾಳುಮಾಡಿದ ಮೇಲೆ, ಆ ದೇಶದಾದ್ಯಂತ ಘೋರವಾದ ಕ್ಷಾಮವು ಬಂದು, ಕೊರತೆಪಡಲಾರಂಭಿಸಿದನು.


ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.


ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.


ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.


ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು; ಅವನು ತಾನು ಪಡೆದ ಲಾಭದ ಆನಂದವನ್ನು ಅನುಭವಿಸುವುದಿಲ್ಲ.


ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡಿಸಿ ಬಿಡುವನು.


ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು.


ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.


ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು