Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:21 - ಕನ್ನಡ ಸಮಕಾಲಿಕ ಅನುವಾದ

21 ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀತಿ ಪ್ರೀತಿ ಪಾಲಿಸುವವನಿಗೆ ಲಭಿಸುವುದು ಆಯುಸ್ಸು, ಕೀರ್ತಿ, ದೊಡ್ಡಸ್ತಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀತಿ ಕೃಪೆಗಳನ್ನು ಹುಡುಕುವವನು ನೀತಿ ಜೀವಕೀರ್ತಿಗಳನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನ್ಯಾಯವನ್ನು ಮತ್ತು ಕರುಣೆಯನ್ನು ಹುಡುಕುವವನಿಗೆ ಒಳ್ಳೆಯ ಜೀವಿತವೂ ನ್ಯಾಯವೂ ಸನ್ಮಾನವೂ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:21
19 ತಿಳಿವುಗಳ ಹೋಲಿಕೆ  

ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.


ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.


ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ಅವು ನಿನಗೆ ಜೀವವಾಗಿರಲಿ. ನಿನ್ನ ಕೊರಳಿಗೆ ಆಭರಣವೂ ಆಗಿರುವುವು.


ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.


ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ.


ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು