Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:7 - ಕನ್ನಡ ಸಮಕಾಲಿಕ ಅನುವಾದ

7 ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:7
16 ತಿಳಿವುಗಳ ಹೋಲಿಕೆ  

ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.


ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.


ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”


ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು