Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:9 - ಕನ್ನಡ ಸಮಕಾಲಿಕ ಅನುವಾದ

9 ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:9
29 ತಿಳಿವುಗಳ ಹೋಲಿಕೆ  

ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು.


ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.


ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.


ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವಳೂ, ಬಹಳ ಸೂಕ್ಷ್ಮ ಗುಣವುಳ್ಳವಳೂ, ನೆಲಕ್ಕೆ ಅಂಗಾಲನ್ನು ಸಹ ಇಡದ ಮಹಿಳೆಯು, ತನ್ನ ಮಗ್ಗುಲಲ್ಲಿರುವ ಗಂಡನ ಕಡೆಗೂ ಹೆತ್ತ ಪುತ್ರಪುತ್ರಿಯರ ಕಡೆಗೂ ಕಠಿಣವಾಗಿರುವಳು.


ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.


ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.


ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು.


ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.


ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.


ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು