Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:28 - ಕನ್ನಡ ಸಮಕಾಲಿಕ ಅನುವಾದ

28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೆರೆಯವನಿಗೆ ವಿರುದ್ಧ ಆಧಾರವಿಲ್ಲದ ಸಾಕ್ಷಿಹೇಳಬೇಡ; ಮಾತಿನಲ್ಲಿ ಅವನಿಗೆ ಮೋಸಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ಮಾತಿನಿಂದ ಮೋಸಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:28
24 ತಿಳಿವುಗಳ ಹೋಲಿಕೆ  

ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!


ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.


ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು.


ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.


ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.


ಪ್ರಾಮಾಣಿಕ ಸಾಕ್ಷಿಯು ಸುಳ್ಳಾಡನು, ಆದರೆ ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ.


ಏಕೆಂದರೆ ಕಾರಣವಿಲ್ಲದೆ ತಮ್ಮ ಬಲೆಯನ್ನು ನನಗೆ ಒಡ್ಡಿದ್ದಾರೆ; ಕಾರಣವಿಲ್ಲದೆ ನನಗೆ ಗುಂಡಿಯನ್ನು ಅಗೆದಿದ್ದಾರೆ.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


“ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,


ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.


“ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು