Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:10 - ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:10
17 ತಿಳಿವುಗಳ ಹೋಲಿಕೆ  

ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.


ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.


ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.


ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ,


ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.


ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.


ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು