Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:18 - ಕನ್ನಡ ಸಮಕಾಲಿಕ ಅನುವಾದ

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಯಜಮಾನನ ಮಾತಿಗೆ ಕಾಯುವವನು ಮಾನವನ್ನನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:18
35 ತಿಳಿವುಗಳ ಹೋಲಿಕೆ  

ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು.


ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?


ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ.


ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.


ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


“ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.


ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.


ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ.


ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ.


ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,


ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.


ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.


ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.


ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.


ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.


ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?


“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.


ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.


“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು