Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:20 - ಕನ್ನಡ ಸಮಕಾಲಿಕ ಅನುವಾದ

20 ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:20
15 ತಿಳಿವುಗಳ ಹೋಲಿಕೆ  

ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.


ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.


ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ.


ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.


ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ?


ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ.


ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.


ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.


ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು