Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:21 - ಕನ್ನಡ ಸಮಕಾಲಿಕ ಅನುವಾದ

21 ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:21
14 ತಿಳಿವುಗಳ ಹೋಲಿಕೆ  

ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.


ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.


ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.


ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು